22/09/2025
ದಿನಾಂಕ 20.09.2025 ರಂದು ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಕೊಪ್ಪಳ ರವರ ಅಧ್ಯಕ್ಷತೆಯಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯು ಅಂಜನಾದ್ರಿ ಬೆಟ್ಟದಲ್ಲಿ ನಡೆಯಿತು.
ಅಂಜನಾದ್ರಿ ಬೆಟ್ಟದ ಹತ್ತಿರ ಪ್ರಗತಿಯಲ್ಲಿರುವ ಪ್ರವಾಸಿ ಮಂದಿರ (ಡಾರ್ಮಿಟರಿ Block ABC ) ಕಾಮಗಾರಿಗಳನ್ನು ವೀಕ್ಷಿಸಿ ಡಿಸೆಂಬರ ತಿಂಗಳಲ್ಲಿ ಹನುಮಮಾಲಾ ಕಾರ್ಯಕ್ರಮ ಇರುವುದರಿಂದ ಪ್ರವಾಸಿಗರು ಹಾಗೂ ಭಕ್ತಾದಿಗಳ ಅನುಕೂಲಕ್ಕಾಗಿ ತ್ವರಿತಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು ಹಾಗೂ ಡಾರ್ಮಿಟರಿ ಬ್ಲಾಕ್ ಗಳಿಗೆ ಅಗತ್ಯವಿರುವ, ವಿದ್ಯುತ್ ಸಂಪರ್ಕ, ಕುಡಿಯುವ ನೀರು, ಸೆಪ್ಟಿಕ್ ಟ್ಯಾಂಕ್, ಬೋರ್ವೆಲ್, ಪಾತ್ ವೇ ಕಾಮಗಾರಿಗಳನ್ನು ಶೀಘ್ರವಾಗಿ ಟೆಂಡರ್ ಕರೆದು ಅನುಷ್ಠಾನಗೊಳಿಸುವಂತೆ ಕೆ.ಟಿ.ಐ.ಎಲ್. ಸಂಸ್ಥೆಯ ಸಹಾಯಕ ಅಭಿಯಂತರರಿಗೆ ಹಾಗೂ ಸೃಷ್ಟಿ ಆರ್ಕಿಟೆಕ್ಟ್ ಮುಖ್ಯಸ್ಥರಾದ ಶ್ರೀಪಾದರ ವರಿಗೆ ತಿಳಿಸಿದರು.
ಪ್ರದಕ್ಷಿಣ ಪಥ ಹಾಗೂ ಥೀಮ್ ಆಧಾರಿತ ಮೆಟ್ಟಿಲುಗಳ ಕಾಮಗಾರಿಗಳಿಗೆ ನಿರಕ್ಷೇಪಣಾ ಪತ್ರ ಪಡೆಯಲು ಎಲ್ಲಾ ಡಾಕ್ಯುಮೆಂಟ್ಗಳನ್ನು ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ರವರು ದಾಖಲೆಗಳನ್ನು ಪರಿಶೀಲಿಸಿದ ನಂತರ Parivesh 2.0 ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸಲು ತಿಳಿಸಿದರು.
ಅಂಜನಾದ್ರಿ ಬೆಟ್ಟದ ಮುಖ್ಯರಸ್ತೆಯನ್ನು ಅಗಲೀಕರಣ ಮತ್ತು ವಿದ್ಯುತ್ ಕಂಬಗಳನ್ನು ಅಳವಡಿಸಲು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಗಂಗಾವತಿ ಇವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಶ್ರೀ ಜನಾರ್ದನ ರೆಡ್ಡಿ ಮಾನ್ಯ ಶಾಸಕರು ಗಂಗಾವತಿ ವಿಧಾನಸಭಾ ಕ್ಷೇತ್ರ, ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಪಂಚಾಯತ ಕೊಪ್ಪಳ, ಮಾನ್ಯ ಸಹಾಯಕ ಆಯುಕ್ತರು , ಆಯುಕ್ತರು ವಿಶ್ವ ಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರ,ಕಾರ್ಯದರ್ಶಿಗಳು ಶ್ರೀ ಹುಲಿಗೆಮ್ಮ ದೇವಿ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ತಹಸೀಲ್ದಾರರು ಗಂಗಾವತಿ, ಸಹಾಯಕ ನಿರ್ದೇಶಕರು ಪುರಾತತ್ವ ಮತ್ತು ವಸ್ತು ಸಂಗ್ರಹಾಲಯ ಪರಂಪರೆ ಇಲಾಖೆ, ವಲಯ ಅರಣ್ಯ ಅಧಿಕಾರಿಗಳು ಗಂಗಾವತಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಪ್ರವಾಸೋದ್ಯಮ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.